ಉದ್ಯೋಗಿಗಳಿಗೆ ವಂಚನೆ: ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್ ಜಾರಿ
ಬೆಂಗಳೂರು: ಉದ್ಯೋಗಿಗಳಿಗೆ ಸರ್ಕಾರಕ್ಕೆ ವಂಚನೆ ಎಸಗಿದ ಆರೋಪದಲ್ಲಿ ಟೀಂ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್ ಜಾರಿಯಾಗಿದೆ.
ಪಿಎಫ್ಓ ರಿಜಿನಲ್ ಕಮಿಷನರ್ ಷಡಕ್ಷರಿ ಗೋಪಾಲ ರೆಡ್ಡಿ ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಇದೇ ತಿಂಗಳು ನಾಲ್ಕರಂದು ಅರೆಸ್ಟ್ ವಾರೆಂಟ್ ಜಾರಿಯಾಗಿದ್ದು ರಾಬಿನ್ ಉತ್ತಪ್ಪ ಪುಲಕೇಶಿ ನಗರದ ನಿವಾಸಿಯಾಗಿರುವ ಕಾರಣ ಅಲ್ಲಿನ ಠಾಣೆಗೆ ಪತ್ರ ಬರೆಯಲಾಗಿದೆ.




