ಬೆಳ್ತಂಗಡಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶಿಕ್ಷಕಿ ಸಾವು
ಬೆಳ್ತಂಗಡಿ: ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿ 2010ರ ಜುಲೈ 30ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡು 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಕಳಿಯ ಗ್ರಾಮದ ಉಬರಡ್ಕ ನಿವಾಸಿ ದಿ. ಕುಂರ್ಬಿಲ ಹಾಗೂ ಲಕ್ಷ್ಮೀ ದಂಪತಿ ಪುತ್ರಿ ಭಾರತಿ (41) ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಅವರು ಅಪಘಾತದ ಬಳಿಕ ಸೊಂಟದ ಸ್ವಾಧೀನ ಕಳೆದುಕೊಂಡು ಮಲಗಿದ್ದಲ್ಲೇ 14 ವರ್ಷ ನರಕಯಾತನೆ ಅನುಭವಿಸಿದ್ದರು. ಕಳೆದ ಕೆಲವು ದಿನಗಳಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು.




