March 18, 2025

ಕೇವಲ 5 ರೂ. ಕುರ್ಕುರೆ ವಿಚಾರಕ್ಕೆ ಮಾರಾಮಾರಿ: 10ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು

0

ದಾವಣಗೆರೆ: ಕೇವಲ 5 ರೂ. ಕುರ್ ಕುರೆ ವಿಚಾರಕ್ಕೆ ಮಾರಾಮಾರಿ ನಡೆದು 10ಕ್ಕೂ ಹೆಚ್ಚು ಜನ ಆಸ್ಪತ್ರೆ ಪಾಲಾದ ಘಟನೆ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದಲ್ಲಿ ನಡೆದಿದೆ.

ಕುರ್ ಕುರೆ ಪ್ಯಾಕೇಟ್ ವಿಚಾರಕ್ಕೆ ಹೊನ್ನೇಬಾಗಿಯ ಅತೀಫ್ ಉಲ್ಲಾ ಹಾಗೂ ಸದ್ದಾಂ ಕುಟುಂಬದ ನಡುವೆ ಮಾರಾಮಾರಿಯಾಗಿದೆ. ಅತೀಫ್ ಉಲ್ಲಾ ಗ್ರಾಮದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ. ಅದೇ ಅಂಗಡಿಯಲ್ಲಿ ಸದ್ದಾಂ ಕುಟುಂಬದ ಮಕ್ಕಳು ಕುರ್ ಕುರೆ ಖರೀದಿ ಮಾಡಿದ್ದರು. ಆದರೆ ಅವಧಿ ಮುಗಿದ ಕುರ್ ಕುರೇ ಮಾರಾಟ ಮಾಡಿದ್ದೀಯಾ, ಬೇರೆಯದನ್ನು ಕೊಡು ಎಂದು ಕೇಳಿದ್ದಕ್ಕೆ ಗಲಾಟೆ ನಡೆದಿದೆ. ಈ ಸಂಬಂಧ ಸದ್ದಾಂ ಕುಟುಂಬಸ್ಥರು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಇದೇ ವಿಚಾರಕ್ಕೆ ದ್ವೇಷ ಸಾಧಿಸಿದ ಅತೀಫ್ ಕುಟುಂಬಸ್ಥರು, ರಸ್ತೆ ಬದಿ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸದ್ದಾಂ ಕುಟುಂಬದ ಮೇಲೆ ಏಕಾಏಕಿ ಕಾರಿನಲ್ಲಿ ಬಂದು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ದೊಣ್ಣೆ ಹಿಡಿದು 20 ಕ್ಕೂ ಹೆಚ್ವು ಜನರು ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೂ ಹಲ್ಲೆ ಮಾಡುವ ಸಂದರ್ಭದಲ್ಲಿ ಬಿಡಿಸಲು ಬಂದವರ ಮೇಲೆಯೂ ಹಲ್ಲೆ ನಡೆಸಿದ್ದು, ಗಾಯಗೊಂಡವರನ್ನು ಚನ್ನಗಿರಿ, ಭದ್ರಾವತಿ ಹಾಗೂ ಶಿವಮೊಗ್ಗ ಅಸ್ಪತ್ರೆಗಳಿಗೆ ದಾಖಲಿಸಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!