March 16, 2025

ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ್ದ ವ್ಯಕ್ತಿಗೆ ಕರೆಂಟ್ ಶಾಕ್ ನೀಡಿ ಹತ್ಯೆ

0

ಬಾಗಲಕೋಟೆ: ಅಬಕಾರಿ ಸಚಿವರ ತವರಲ್ಲಿ ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದಕ್ಕೆ ಐವರಿಂದ ಓರ್ವ ವ್ಯಕ್ತಿಯನ್ನು ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವೆಂಕರೆಡ್ಡಿ ಶೇಷಪ್ಪನವರ(40)ಗೆ ಕಟ್ಟಿಗೆಯಿಂದ ಹಲ್ಲೆ ನಡೆಸಿ ಕರೆಂಟ್ ಶಾಕ್ ನೀಡಲಾಗಿದೆ. ಸದ್ಯ ಈ ಕೊಲೆ ಕೇಸ್ನಲ್ಲಿ ಐವರು ಆರೋಪಿಗಳನ್ನು ಕೆರೂರು ಪೊಲೀಸರು ಬಂಧಿಸಿದ್ದಾರೆ. ಹನುಮಂತ ನೀಲರ್, ಪತ್ನಿ ಶೈಲಾ ನೀಲರ್, ಪರ್ವತಗೌಡ ಮುದಿಗೌಡ್ರ ಪುಟ್ಟಪ್ಪ ಮುದಿಗೌಡ್ರ, ಸಿದ್ದಪ್ಪ ನೀಲಗೌಡ್ರ ಬಂಧಿತರು.

ಬಂಧಿತ ಆರೋಪಿ ಹನುಮಂತ ನೀಲರ್ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು. ಮದ್ಯ ಸೇವಿಸಿ ವೆಂಕರೆಡ್ಡಿ ಮನೆ ಮುಂದೆ ಪ್ಯಾಕೆಟ್ ಬಿಸಾಡಿ ಹೋಗುತ್ತಿದ್ದರು. ಜೊತೆಗೆ ಕುಡಿದ ಅಮಲಿನಲ್ಲಿ ಕೆಲವರು ವೆಂಕರೆಡ್ಡಿ ಮನೆ ಮುಂದೆ ಜಗಳವಾಡುತ್ತಿದ್ದರು. ಹೀಗಾಗಿ ನಮ್ಮ ಮನೆ ಬಳಿ ಮದ್ಯ ಮಾರಬೇಡಿ ಎಂದು ವೆಂಕರೆಡ್ಡಿ ಹೇಳಿದ್ದರು.

 

 

Leave a Reply

Your email address will not be published. Required fields are marked *

error: Content is protected !!