ಪುತ್ತೂರು: ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ವಂಚನೆ

ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಅಬೂಬಕ್ಕರ್ ಸಿದ್ದಿಕ್, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ