March 16, 2025

ಸಿದ್ದರಾಮಯ್ಯ ಮೈಸೂರಿನ ಸುಪುತ್ರ, ಅವರ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು?: ಬಿಜೆಪಿ ಮುಖಂಡ ಪ್ರತಾಪ್‌ ಸಿಂಹ

0

ಮೈಸೂರು: 40 ವರ್ಷ ದಿಂದ ವಿಧಾನಸಭೆಗೆ ಸಿದ್ದರಾಮಯ್ಯ ಹೋಗಿದ್ದಾರೆ. ಅವರ ಹೆಸರನ್ನು ರಸ್ತೆಗೆ ಇಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಂಸದ ಪ್ರತಾಪ್‌ ಸಿಂಹ ಸಿಎಂ ಪರ ಬ್ಯಾಟ್‌ ಬೀಸಿದ್ದಾರೆ.

ಮೈಸೂರಿನ ಕೆಆರ್ ಎಸ್ ರಸ್ತೆಗೆ ʼಸಿದ್ದರಾಮಯ್ಯ ಆರೋಗ್ಯ ರಸ್ತೆʼ ಎಂದು ಪಾಲಿಕೆ ನಾಮಕರಣ ಮಾಡಲು ಮುಂದಾದ ವಿಚಾರಕ್ಕೆ ವಿರೋಧ ವ್ಯಕ್ತವಾದ ಬಗ್ಗೆ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಸೈದ್ಧಾಂತಿಕವಾಗಿ ನಾವು ಅವರನ್ನು ವಿರೋಧಿಸುತ್ತೇನೆ. ಆದರೆ ಈ ವಿಚಾರದಲ್ಲಿ ವಿರೋಧ ಮಾಡಲ್ಲ‌. ಸ್ಪಷ್ಟ ಬಹುಮತದ ಜೊತೆ ಎರಡು ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆ ಬಹಳ ಇದೆ ಎಂದು ಹೇಳಿದರು.

 

 

Leave a Reply

Your email address will not be published. Required fields are marked *

error: Content is protected !!