March 16, 2025

ಬಿಜೆಪಿ ಶಾಸಕ ಮುನಿರತ್ನ ಮೇಲೆ ಕಲ್ಲು, ಮೊಟ್ಟೆ ಎಸೆತ

0

ಬೆಂಗಳೂರು: ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಡಿಕೆ ಸುರೇಶ್‌, ಡಿಕೆ ಶಿವಕುಮಾರ್‌ ಅವರ ಕಡೆಯವರಿಂದ ನನ್ನ ಮೇಲೆ ಆಸೀಡ್‌ ದಾಳಿ ನಡೆದಿದೆ ಎಂದು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಲಗ್ಗೆರೆ ಬಳಿಕ ಲಕ್ಷ್ಮಿದೇವಿ ನಗರದಲ್ಲಿ ವಾಜಪೇಯಿಯವರ 100 ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮುನಿರತ್ನ ಭಾಗಿಯಾಗಿದ್ದರು. ಈ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದಾಗ ಮುನಿರತ್ನ ಮೇಲೆ ಕಲ್ಲು ಮತ್ತು ಮೊಟ್ಟೆ ದಾಳಿ ನಡೆದಿದೆ. ಕಾರಿನ ಗಾಜಿನ ಮೇಲೆಯೇ ಕಲ್ಲು ಬಿದ್ದಿದೆ. ಕೂಡಲೇ ಪೊಲೀಸರು ಮೊಟ್ಟೆ ಎಸೆದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಮೊಟ್ಟೆಯ ಒಳಗಡೆ ಆಸಿಡ್ ಹಾಕಿ ದಾಳಿ ಮಾಡಿದ್ದಾರೆ. ಗುಂಪು ದಾಳಿ ಮಾಡಿ ನನ್ನ ಕೊಲೆ ಮಾಡಲು ಮುಂದಾಗಿದ್ದಾರೆ. ಡಿಕೆ ಸುರೇಶ್‌ ಅವರಿಗೆ ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಬೇಕು ಎಂಬ ಆಸೆ ಇದೆ. ಈ ಕಾರಣಕ್ಕೆ ನನ್ನ ಮೇಲೆ ದಾಳಿ ನಡೆದಿದೆ ಎಂದು ದೂರಿದರು.

 

 

Leave a Reply

Your email address will not be published. Required fields are marked *

error: Content is protected !!