March 16, 2025

ಸಿ.ಟಿ.ರವಿ ಬಂಧನ ಪ್ರಕರಣ: ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅಮಾನತು

0

ಬೆಳಗಾವಿ: ಬಿಜೆಪಿ ವಿಧಾನ ಪರಿಷತ್‌ ಸದಸ್ಯರಾದ ಸಿ.ಟಿ.ರವಿ ಅವರ ಬಂಧನ ಪ್ರಕರಣ ಹಾಗೂ ಆ ನಂತರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಬಿಜೆಪಿ ನಾಯಕ ಸಿ. ಟಿ.ರವಿ ಪರ ಬಿಜೆಪಿ ನಾಯಕರನ್ನು ಠಾಣೆಯ ಒಳಗಡೆ ಬರಲು ಅನುಮತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಆದೇಶ ಹೊರಡಿಸಿದ್ದಾರೆ. ಸಿ.‌ಟಿ.‌ರವಿ ಅವರನ್ನು ಹಿರೇಬಾಗೆವಾಡಿ ಠಾಣೆಯಿಂದ ಖಾನಾಪುರ ಠಾಣೆಗೆ ಕರೆ ತಂದಾಗ ಹಲವು ರಾಜಕೀಯ ನಾಯಕರು ಇನ್ಸಪೆಕ್ಟರ್ ಕೊಠಡಿವರೆಗೆ ಪ್ರವೇಶಿಸಿ ಕುಳಿತು ಚರ್ಚೆ ನಡೆಸಿದ್ದರು.

 

 

Leave a Reply

Your email address will not be published. Required fields are marked *

error: Content is protected !!