February 4, 2026

ಡಿಎಂಕೆಯನ್ನು ಅಧಿಕಾರದಿಂದ ಕಿತ್ತೆಸೆಯುವ ತನಕ ಚಪ್ಪಲಿ ಧರಿಸಲ್ಲ ಎಂದ ಅಣ್ಣಾಮಲೈ: ವೇದಿಕೆಯಲ್ಲೇ ಶೂ ಕಳಚಿ ಪ್ರತಿಜ್ಞೆ

0
image_editor_output_image-2127430428-1735289330240.jpg

ಚೆನ್ನೈ : ತಮಿಳುನಾಡಿನಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕಿತ್ತೆಸೆಯುವ ತನಕ ಚಪ್ಪಲಿ ಧರಿಸುವುದಿಲ್ಲ ಎಂದು ತಮಿಳುನಾಡಿನ ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಯವರು ಮಾಡಿರುವ ಘೋರ ಪ್ರತಿಜ್ಞೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಆಕೆಗೆ ನ್ಯಾಯ ಕೊಡಿಸಲು ಬಿಜೆಪಿ ರಾಜ್ಯವ್ಯಾಪಿಯಾಗಿ ಹೋರಾಟ ನಡೆಸುತ್ತಿದೆ. ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಮಿಳುನಾಡಿನ ಕೇಸರಿ ಪಡೆ ಆಂದೋಲನದ ಹಾದಿ ಹಿಡಿದಿದೆ. ಗುರುವಾರವೂ ಪ್ರತಿಭಟನೆ ನಡೆದಿದ್ದು, ಪೊಲೀಸರು ವಿವಿಧೆಡೆ ಕಮಲ ನಾಯಕರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!