March 15, 2025

ಪುತ್ತೂರು: ರಸ್ತೆ ಬದಿಯ ಹೊಂಡಕ್ಕೆ ಉರುಳಿದ ಕಾರು: ಮೂವರು ಮೃತ್ಯು

0

ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ‌ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತಪಟ್ಟವರನ್ನು ಸುಳ್ಯ ಮೂಲದವರು ಎಂದು ಹೇಳಲಾಗಿದೆ.
ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ ನಡೆದಿದ್ದು, ಜನರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಮುಂಜಾನೆ ವೇಳೆ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

 

 

Leave a Reply

Your email address will not be published. Required fields are marked *

You may have missed

error: Content is protected !!