February 4, 2026

ಕಾಸರಗೋಡು: ನದಿಯಲ್ಲಿ ಸ್ನಾನಕ್ಕಿಳಿದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತ್ಯು

0
n6452959391735399438981df860431c502836c7ec60b463378990e076c16fe28c9b25f048d36d41e9d8b48.jpg

ಕಾಸರಗೋಡು: ನದಿಯಲ್ಲಿ ಸ್ನಾನಕ್ಕಿಳಿದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಶನಿವಾರ ಮಧ್ಯಾಹ್ನ ಬೋವಿಕ್ಕಾನ ಸಮೀಪದ ಎರಿಂಞಪುಯದಲ್ಲಿ ನಡೆದಿದೆ.

ಸಿದ್ದಿಕ್ ರವರ ಪುತ್ರ ರಿಯಾಜ್ (16), ಅಶ್ರಫ್ ರವರ ಪುತ್ರ ಯಾಸಿನ್ (13) ಮತ್ತು ಮಜೀದ್ ರವರ ಪುತ್ರ ಸಮದ್ (13) ಮೃತಪಟ್ಟವರು. ಮಧ್ಯಾಹ್ನ ಸಮೀಪ ನಿವಾಸಿಗಳಾದ ಮೂವರು ವಿದ್ಯಾರ್ಥಿಗಳು ಸ್ನಾನಕ್ಕೆ ಇಳಿದಿದ್ದಾರೆ. ಈ ವೇಳೆ ಈ ಅವಘಡ ನಡೆದಿದೆ.

ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ನೀರುಪಾಲಾಗಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬಂದಿಗಳು ಹಾಗೂ ಸೈಫುದ್ದೀನ್ ನೇತೃತ್ವದ ಸ್ಕೂಬಾ ತಂಡವು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿದರೂ ಮೂವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಗಾರದಲ್ಲಿರಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!