January 31, 2026

ಕಾರವಾರ: ಕೆಎಸ್ಆರ್‌ಟಿಸಿ ಬಸ್, ಬೈಕ್ ನಡುವೆ ಭೀಕರ ಅಪಘಾತ: ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

0
image_editor_output_image-1385745110-1735715328174.jpg

ಕಾರವಾರ: ಶರಾವತಿ ಸೇತುವೆ ಮೇಲೆ ಕೆಎಸ್ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ರಾಘವೇಂದ್ರ ಸೋಮಯ್ಯ ಗೌಡ, ಮಾವಿನಕುರ್ವಾ(34), ಗೌರೀಶ್ ನಾಯ್ಕ ಸಂಶಿ(25) ಹಾಗೂ ರಮೇಶ್ ನಾಯ್ಕ ಕರ್ವನಕುರ್ವ(22) ಎಂದು ಗುರುತಿಸಲಾಗಿದೆ.

ವಿಜಾಪುರದಿಂದ ಮಂಗಳೂರು ಕಡೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್, ಹಾಗೂ ಮಂಕಿ ಕಡೆಯಿಂದ ಹೊನ್ನಾವರದ ಕಡೆ ಬರುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ‌ ಪರಿಶೀಲನೆ ನಡೆಸಿದರು. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!