March 17, 2025

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಕ್ಕಳಿಬ್ಬರು ಸಾವು

0

ವಿಜಯಪುರ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮತ್ತು ಗಂಡು ಮಕ್ಕಳಿಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ.

ಗೀತಾ ಬಡಗಿ(28), ಮಕ್ಕಳಾದ ಶ್ರವಣ್(6), ಶರಣ್(4) ನೀರುಪಾಲಾದವರು. ಮೃತ ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ.

ಯಾಳವಾರ ಗ್ರಾಮದ ನಿವಾಸಿ ಶ್ರೀಶೈಲ ಜೊತೆಗೆ ಮದುವೆಯಾಗಿದ್ದ ಗೀತಾ, ಗಂಡನ ಜೊತೆ ಜಗಳವಾಡಿ ತವರು ಮನೆಗೆ ಬಂದಿದ್ದರು. ಈ ವೇಳೆ ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಸದ್ಯ ತಾಯಿ ಮತ್ತು ಗಂಡು ಮಕ್ಕಳಿಬ್ಬರ ಶವಗಳನ್ನು ಸ್ಥಳೀಯರು ಹೊರ ತೆಗೆದಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!