ಮಾಣಿ: ಚಲಿಸುತ್ತಿದ್ದ ಬಸ್ಸಿನಿಂದ ಹೆದ್ದಾರಿಗೆ ಕಳಚಿ ಬಿದ್ದ ಡಿಸೇಲ್ ಟ್ಯಾಂಕ್: ಹೆದ್ದಾರಿ ಕಾಮಗಾರಿ ಅವಾಂತರ
ವಿಟ್ಲ: ಚಲಿಸುತ್ತಿದ್ದ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿನ ಡೀಸೆಲ್ ಟ್ಯಾಂಕ್ ಹೆದ್ದಾರಿಗೆ ಕಳಚಿ ಬಿದ್ದ ಘಟನೆ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಸರಕಾರಿ ಬಸ್ ನಿಂದ ಡಿಸೇಲ್ ಟ್ಯಾಂಕ್ ಹೆದ್ದಾರಿಗೆ ಕಳಚಿದೆ. ಇದರ ಬಸ್ ಸಂಚಾರ ಸ್ಥಗಿತಗೊಂಡಿದೆ. ಬದಲಿ ಬಸ್ಸಿನ ಮೂಲಕ ಪ್ರಯಾಣಿಕರು ಸಂಚರಿಸಲು ಅನುಮಾಡಿಕೊಡಲಾಯಿತು. ಹೆದ್ದಾರಿ ಅವ್ಯವಸ್ಥೆಯಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ.




