March 15, 2025

ಬೆಳ್ತಂಗಡಿ: ಟಿ.ಬಿ ಕ್ರಾಸ್-ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಉಜಿರೆ ಗ್ರಾಮ ವ್ಯಾಪ್ತಿಯ ಟಿ.ಬಿ ಕ್ರಾಸ್ ನಿಂದ ಕುತ್ರೊಟ್ಟು ವರೆಗೆ ಸಂಪರ್ಕಿಸುವ ರಸ್ತೆಯ ಚರಂಡಿ ವ್ಯವಸ್ಥೆ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಆಗ್ರಹಿಸಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಬಕ್ಕಪ್ಪ ಎಚ್ (ಬಿ. ಇ) ಅವರಿಗೆ ಬುಧವಾರ ಮನವಿ ನೀಡಲಾಯಿತು.

 

 

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಅಧ್ಯಕ್ಷರು ಆಸೀರ್ ಕುಂಟಿನಿ, ಉಜಿರೆ ಬ್ಲಾಕ್ ಅಧ್ಯಕ್ಷರು ಮೊಹಮ್ಮದ್ ಅಲಿ, ಗ್ರಾಮ ಪಂಚಾಯತ್ ಸದಸ್ಯರಾದ ಸಲೀಂ ಕುಂಟಿನಿ, ಎಸ್.ಡಿ.ಟಿ.ಯು ಆಟೋ ಯೂನಿಯನ್ ಹಳೆಪೇಟೆ ಅಧ್ಯಕ್ಷರಾದ ಶರೀಫ್ ಎಸ್.ಎಂ, ಸಾಲಿ ಅತ್ತಾಜೆ, ಅಝೀಝ್ ಕುಂಟಿನಿ, ಇಕ್ಬಾಲ್ ಕುಂಟಿನಿ, ಮೊಹಮ್ಮದ್ ಮುಗುಳಿ, ಖಾದರ್ ನಾಡ್ಜೆ, ಸಾದಿಕ್ ಅತ್ತಾಜೆ , ಅಫ್ರಾನ್ ಕುಂಟಿನಿ, ಫಾಝಿಲ್ ಕುಂಟಿನಿ ಉಪಸ್ಥಿತರಿದ್ದರು.

ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಬಕ್ಕಪ್ಪ ಎಚ್ ಅವರು ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು.

Leave a Reply

Your email address will not be published. Required fields are marked *

error: Content is protected !!