March 16, 2025

ಚಾಕುವಿನಿಂದ ಇರಿದು ತಂಗಿಯನ್ನೇ ಕೊಲೆ ಮಾಡಿದ ಅಣ್ಣ

0

ಚಾಮರಾಜನಗರ: ಜ್ವರ ಬಂದ ಪುಟ್ಟ ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಎಂದಿದ್ದಕ್ಕೆ ತನ್ನ ತಂಗಿಯನ್ನೇ ಅಣ್ಣ ಕೊಲೆ ಮಾಡಿದ ಘಟನೆ ಕೊಳ್ಳೇಗಾಲದ ಈದ್ಗಾ ಮೊಹಲ್ಲಾದಲ್ಲಿ ಬುಧವಾರ ನಡೆದಿದೆ.

ಚಾಕು ಇರಿತಕ್ಕೊಳಗಾದ ಐಮಾನ್ ಬಾನು(26) ಸ್ಥಳದಲ್ಲೇ ಮೃತಪಟ್ಟರೆ, ಸೈಯದ್(60) ಮತ್ತು ತಸ್ಲಿಮಾ ತಾಜ್(25) ಗಂಭೀರವಾಗಿ ಗಾಯಗೊಂಡು ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜ್ವರ ಬಂದಿದ್ದ ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಎಂದಿದ್ದೇ ಕಲಹಕ್ಕೆ ಕಾರಣ. ಇದರಿಂದ ಕೋಪಗೊಂಡ ವ್ಯಕ್ತಿ ಎಲ್ಲರಿಗೂ ಚಾಕುವಿನಿಂದ ಇರಿದಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಚಾಕು ಇರಿದ ಫರ್ಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!