March 16, 2025

ಕಡಬ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

0

ಕಡಬ: ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಶಿರಾಡಿ ಗ್ರಾಮದ ಪೇರಮಜಲು ಎಡಪ್ಪಾಟ್ ನಿವಾಸಿ ವರ್ಕಿ ಇ.ಪಿ. (59) ಎಂದು ಗುರುತಿಸಲಾಗಿದೆ.

ವರ್ಕಿ ಅವರು ಅಡ್ಡಹೊಳೆ ಮಿತ್ತಮಜಲು ಎಂಬಲ್ಲಿರುವ ಸಹೋದರ ಜೋಯಿ ಇ.ಪಿ.ಎಂಬವರ ಮನೆಗೆ ಕೆಲಸಕ್ಕೆ ಹೋದವರು ಅಲ್ಲಿ ತೆಂಗಿನಮರ ಏರಿ ತೆಂಗಿನ ಕಾಯಿ ಕೀಳುತ್ತಿರುದ್ದ ವೇಳೆ ಆಕಸ್ಮಿಕವಾಗಿ ಕೈ ಜಾರಿ ಮರದಿಂದ ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡಿದ್ದರು. ಅವರನ್ನು ತಕ್ಷಣ ಚಿಕಿತ್ಸೆಗಾಗಿ ನೆಲ್ಯಾಡಿ అల్పీని ಆಸ್ಪತ್ರೆಗೆ ಕರೆತರಲಾಯಿತಾದರೂ es ವೇಳೆಗೆ ಅವರು ಮೃತಪಟ್ಟಿದ್ದರು ಎಂದು ವರದಿಯಾಗಿದೆ.

 

 

ಮೃತರ ಪುತ್ರ ಶ್ಯಾಮ್ ಇ.ವಿ.ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!