March 18, 2026

ಉಡುಪಿ: ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ: ವಾಗ್ಮಿ ಮೀನಾಕ್ಷಿ ಶಹರವತ್ ಸೇರಿದಂತೆ ಇಬ್ಬರ ವಿರುದ್ಧ FIR ದಾಖಲು

0
image_editor_output_image-2139863706-1736226760542.jpg

ಉಡುಪಿ: ಉಡುಪಿ ಪಿಪಿಸಿ ಆಡೋಟೋರಿಯಂನಲ್ಲಿ ಜ.4ರಂದು ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಆರೋಪದಲ್ಲಿ ಡೆಹ್ರಾಡೂನ್‌ನ ವಾಗ್ಮಿ ಮೀನಾಕ್ಷಿ ಶಹರವತ್ ಸೇರಿದಂತೆ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಮೀನಾಕ್ಷಿ ಶಹರವತ್ ಕಾರ್ಯಕ್ರಮದಲ್ಲಿ ಬಾಂಗ್ಲಾ ಪಾಠ ಎಂಬ ವಿಷಯದ ಬಗ್ಗೆ ಉದ್ದೇಶಿಸಿ ಮಾತನಾಡಿ, ಗಾಂಧೀಜಿ ಜಿನ್ನಾ ಜೊತೆಗೆ ಸೇರಿಕೊಂಡು ಪಾಕಿಸ್ತಾನಕ್ಕೆ ಜನ್ಮ ನೀಡಿದ್ದಾರೆ, ನಾವು ಮಹಾತ್ಮಾ ಗಾಂದೀಜಿಯನ್ನು ರಾಷ್ಟ್ರಪಿತ ಎಂದು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಹೀಗೆ ಅವರು ತಮ್ಮ ಭಾಷಣದಲ್ಲಿ ದೇಶದ ಬೇರೆ ಬೇರೆ ಧರ್ಮಗಳ ನಡುವೆ ಘರ್ಷಣೆ ಹಾಗೂ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿರುವುದಾಗಿ ದೂರಲಾಗಿದೆ.

ಅದರಂತೆ ಮೀನಾಕ್ಷಿ ಶಹರವತ್ ಮತ್ತು ಕಾರ್ಯಕ್ರಮದ ಆಯೋಜಕ ಗೋವಿಂದರಾಜು ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 353(2) ಜೊತೆಗೆ 3(5)ರಡಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!