ಪುತ್ತೂರು: KSRTC ಬಸ್ ಮತ್ತು ಬೈಕ್ ನಡುವೆ ಅಪಘಾತ: ಇಬ್ಬರು ಗಂಭೀರ ಗಾಯ

ಪುತ್ತೂರು: ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಕೊಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ನಡೆದಿದೆ.
ಡಿಕ್ಕಿಯ ಪರಿಣಾಮ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಸವಾರರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡ ವಿದ್ಯಾರ್ಥಿಗಳನ್ನು ಬೆಳ್ಳಿಪ್ಪಾಡಿಯ ನಿಶಾಂತ್ ಮತ್ತು ಕಾರ್ತಿಕ್ ಎಂದು ಗುರುತಿಸಲಾಗಿದೆ.