February 12, 2025

ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪುತ್ರ ಆತ್ಮಹತ್ಯೆ: 7ನೇ ತರಗತಿ ಓದುತ್ತಿದ್ದ ತ್ರಿಶಾಲ್‌

0

ತುಮಕೂರು: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಮನೆಯಲ್ಲಿ ದುರಂತ ಸಂಭವಿಸಿದೆ. ಶಕುಂತಲಾ ಅವರ ಮಗ 13 ವರ್ಷದ ತ್ರಿಶಾಲ್ ಜೀವ ಕಳೆದುಕೊಂಡಿದ್ದಾನೆ. 7ನೇ ತರಗತಿ ಓದುತ್ತಿದ್ದ ತ್ರಿಶಾಲ್‌ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶಕುಂತಲಾ ನಟರಾಜ್ ಕುಟುಂಬ ತುಮಕೂರು ನಗರದ ವಿಜಯನಗರದ 2 ಮುಖ್ಯ ರಸ್ತೆಯ ಬಾಡಿಗೆ ಮನೆಯಲ್ಲಿ ನೆಲೆಸಿದೆ. ಮೃತ ತ್ರಿಶಾಲ್ ಸರ್ವೊದಯ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ. ಮನೆಯಲ್ಲಿ ತ್ರಿಶಾಲ್ ಡೆತ್‌ ನೋಟ್ ಬರೆದಿಟ್ಟಿು ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ತನ್ನ ತಾಯಿ ಶಕುಂತಲಾ ಜೊತೆ ವಾಸವಿದ್ದ ತ್ರಿಶಾಲ್, ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಕೃತ್ಯ ನಡೆದಿದೆ. ಶಾಲಾ ಸಮವಸ್ತ್ರದಲ್ಲೇ ತ್ರಿಶಾಲ್ ಮೃತದೇಹ ಪತ್ತೆಯಾಗಿದೆ. ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ನಡೆದಿದ್ದು, ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!