March 18, 2026

ಪಿಲಿಕುಳದಲ್ಲಿ ಕಂಬಳಕ್ಕೆ ಅವಕಾಶ ಅರ್ಜಿ: ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿದ ಹೈಕೋರ್ಟ್‌

0
image_editor_output_image151178855-1736577535782.jpg

ಬೆಂಗಳೂರು: ಪಿಲಿಕುಳ ಜೈವಿಕ ಪಾರ್ಕ್‌ನ ಸಮೀಪ ಕಂಬಳಕ್ಕೆ ಅವಕಾಶ ನೀಡಬಾರದು ಮತ್ತು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹೊರಗೂ ಕಂಬಳ ನಿಷೇಧ ಮಾಡಬೇಕು ಎಂದು ಪ್ರಾಣಿ ದಯಾ ಸಂಘಟನೆ ಪೇಟಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ರಾಜ್ಯ ಹೈಕೋರ್ಟ್‌ ಜನವರಿ 21ಕ್ಕೆ ಮುಂದೂಡಿತು.

ಶುಕ್ರವಾರ ಪ್ರಕರಣದ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಮತ್ತು ನ್ಯಾ| ಎಂ.ಐ. ಅರುಣ್‌ ಅವರ ವಿಭಾಗೀಯ ನ್ಯಾಯಪೀಠದ ಮುಂದೆ ಬಂದ ಸಂದರ್ಭದಲ್ಲಿ ರಾಜ್ಯ ಸರಕಾರದ ಪರ ಹಾಜರಾದ ವಕೀಲರು, ಅಡ್ವೋ ಕೇಟ್‌ ಜನರಲ್‌ ಅವರು ಇಂದು ಲಭ್ಯರಿಲ್ಲ, ಆದ್ದರಿಂದ ವಿಚಾರಣೆಯನ್ನು ಮುಂದೂಡುವಂತೆ ನ್ಯಾಯಲಯವನ್ನು ಕೋರಿದರು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಜ. 21ಕ್ಕೆ ನ್ಯಾಯಾಲಯ ಮುಂದೂಡಿತು.

Leave a Reply

Your email address will not be published. Required fields are marked *

error: Content is protected !!