ಹುಬ್ಬಳ್ಳಿಯಲ್ಲಿ ಕೆನರಾ ಬ್ಯಾಂಕ್ ಶಾಖೆಯಲ್ಲಿ ದರೋಡೆಗೆ ವಿಫಲ ಯತ್ನ: ಬ್ಯಾಂಕಿನ ಮುಖ್ಯದ್ವಾರದ ಬಾಗಿಲು ಮುರಿದ ದುಷ್ಕರ್ಮಿಗಳು
ಹುಬ್ಬಳ್ಳಿ: ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ ಹಾಗೂ ಬೀದರ್ನಲ್ಲಿ ಎಟಿಎಂ ಹಣ ದರೋಡೆ ಪ್ರಕರಣಗಳು ರಾಜ್ಯದಲ್ಲಿ ಸದ್ದು ಮಾಡುತ್ತಿವೆ. ಈ ಹೊತ್ತಿನಲ್ಲೇ ಹುಬ್ಬಳ್ಳಿಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ದರೋಡೆಗೆ ವಿಫಲ ಯತ್ನ ನಡೆದಿದೆ.
ಹುಬ್ಬಳ್ಳಿ ಎಪಿಎಂಸಿಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ದರೋಡೆಗೆ ವಿಫಲ ಯತ್ನ ನಡೆದಿದೆ. ಬ್ಯಾಂಕಿನ ಮುಖ್ಯದ್ವಾರದ ಬಾಗಿಲು ಮುರಿದು, ಬೀಗ ಕಟ್ ಮಾಡಿರುವ ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದಾರೆ. ಇದಕ್ಕೆ ಬ್ಯಾಂಕ್ ಮುಖ್ಯಾಧಿಕಾರಿಯ ನಿರ್ಲಕ್ಷ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ.




