January 31, 2026

ಮಗುವಿಗೆ ದೃಷ್ಟಿ ತೆಗೆದ ನೀರನ್ನು ರಸ್ತೆಗೆ ಚೆಲ್ಲಿದ್ದಕ್ಕೆ ಗಲಾಟೆ: ವ್ಯಕ್ತಿಯನ್ನು ಕೊಲೆ ಮಾಡಿದ ಮಹಿಳೆಯರ ಗುಂಪು

0
image_editor_output_image552184998-1737622188162.jpg

ಆನೇಕಲ್: ಮಗುವಿಗೆ ದೃಷ್ಟಿ ತೆಗೆದ ನೀರನ್ನು ರಸ್ತೆಗೆ ಚೆಲ್ಲಿದ್ದಕ್ಕೆ ನಡೆದ ಗಲಾಟೆಯಲ್ಲಿ ವ್ಯಕ್ತಿ ಸಾವಿಗೀಡಾಗಿರುವ ಘಟನೆ ಆನೇಕಲ್‌ನಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆನೇಕಲ್ ಸಮೀಪದ ದೊಡ್ಡಹಾಗಡೆ ಗ್ರಾಮದಲ್ಲಿ ಘಟನೆ ನಡೆದಿದ್ದು, ರಾಮಚಂದ್ರಪ್ಪ (45) ಮೃತ ವ್ಯಕ್ತಿ. ಅಕ್ಕಪಕ್ಕದ ನಿವಾಸಿಗಳ ಮಧ್ಯೆ ಗಲಾಟೆ ನಡೆದಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ರಾಮಚಂದ್ರಪ್ಪ ಸಾವನ್ನಪ್ಪಿದ್ದಾರೆ.

ರಾಮಚಂದ್ರಪ್ಪ ಸ್ವಂತ ಟ್ರಾಕ್ಟರ್ ಇಟ್ಟುಕೊಂಡಿದ್ದರು. ಮಗುವಿಗೆ ದೃಷ್ಟಿ ತೆಗೆದ ನೀರನ್ನು ರಸ್ತೆಗೆ ಚೆಲ್ಲಿದ್ದಕ್ಕೆ ಪಕ್ಕದ ಮನೆಯ ನಿವಾಸಿಗಳ ಜೊತೆ ಗಲಾಟೆಯಾಗಿತ್ತು. ಮಹಿಳೆಯರು ಗುಂಪು ಕಟ್ಟಿಕೊಂಡು ರಾಮಚಂದ್ರಪ್ಪ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಈ ವೇಳೆ ಹಲ್ಲೆಯಿಂದ ನೆಲಕ್ಕೆ ಉರುಳಿ ಬಿದ್ದಿದ್ದ. ಕೂಡಲೇ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ರಾಮಚಂದ್ರಪ್ಪ ಮೃತಪಟ್ಟಿದ್ದಾರೆ. ಹಲ್ಲೆ ನಡೆಸಿದ ಆರೋಪದಲ್ಲಿ ಇಬ್ಬರು ಮಹಿಳೆಯರು ಪೊಲೀಸರ ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!