March 19, 2026

2 ಕೋಟಿ ರೂ. ಸಾಲ ತೀರಿಸಲಾಗದೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

0
image_editor_output_image-532752510-1737695143301.jpg

ಬೆಂಗಳೂರು: 2 ಕೋಟಿ ಸಾಲ ತೀರಿಸಲಾಗದೇ ವ್ಯಕ್ತಿಯೊಬ್ಬ ನಗರದ ಮಂತ್ರಿ ಮಾಲ್‌ ಒಳಗೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಉಲ್ಲಾಳ ಉಪನಗರದ ನಿವಾಸಿ ಮಂಜುನಾಥ್ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಲ್ಲೇಶ್ವರಂ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಕ್ತಿ 2 ಕೋಟಿ ಸಾಲ ಮಾಡಿಕೊಂಡಿದ್ದರು. ಇಂದು ರಾತ್ರಿ 9 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಜುನಾಥ್‌ ಎಲೆಕ್ಟ್ರಿಕಲ್ ಅಂಗಡಿ ಇಟ್ಟುಕೊಂಡಿದ್ದರು. ಸಾಲ ತೀರಿಸಲಾಗದೆ ಡೆತ್‌ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ‘2 ಕೋಟಿ ಸಾಲ‌ ಮಾಡಿಕೊಂಡಿದ್ದೇನೆ. ಅದನ್ನ ಈ ಜನ್ಮದಲ್ಲಿ ತೀರಿಸಲು ಸಾಧ್ಯವಿಲ್ಲ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!