March 18, 2025

ಮಂಗಳೂರು: ಠಾಣೆಯಿಂದ ಸ್ಕೂಟರ್ ಬಿಡುಗಡೆಗೆ 5 ಸಾವಿರ ರೂ. ಲಂಚದ ಬೇಡಿಕೆ: ಪೊಲೀಸ್ ಇನ್‌ಸ್ಪೆಕ್ಟರ್ ಶರೀಫ್‌ ಲೋಕಾಯುಕ್ತ ಬಲೆಗೆ

0

ಮಂಗಳೂರು: ಠಾಣೆಯಿಂದ ಸ್ಕೂಟರ್ ಬಿಡುಗಡೆಗೊಳಿಸಲು ಲಂಚ ಪಡೆದ ಆರೋಪದ ಮೇಲೆ ನಗರದ ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಶರೀಫ್‌ ಹಾಗೂ ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ನ್ಯಾಯಾಲಯವು ಆದೇಶ ಮಾಡಿತ್ತು. ಈ ಸಲುವಾಗಿ ದೂರುದಾರರು ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಅವರನ್ನು ಭೇಟಿ ಮಾಡಿದ್ದರು. ಸ್ಕೂಟರ್ ಬಿಡುಗಡೆಗೊಳಿಸಲು 5 ಸಾವಿರ ಲಂಚ ನೀಡುವಂತೆ ಷರೀಫ್‌ ಬೇಡಿಕೆ ಇಟ್ಟಿದ್ದರು.

ಮೊತ್ತವನ್ನು ಕಡಿಮೆ ಮಾಡುವಂತೆ ಕೋರಿದಾಗ ಠಾಣಾ ಬರಹಗಾರರಾದ ನಾಗರತ್ನ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಆಕೆಯ ಬಳಿ ಹೋದಾಗ, ಅವಾಚ್ಯವಾಗಿ ಬೈದು ₹ 3 ಸಾವಿರ ಲಂಚ ನೀಡುವಂತೆ ಹೇಳಿದ್ದರು. ಲಂಚ ನೀಡಲು ಮನಸ್ಸಿಲ್ಲದ ಕಾರಣ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು’ ಎಂದು ಲೋಕಾಯುಕ್ತ ಪೊಲೀಸರರು ತಿಳಿಸಿದ್ದಾರೆ

 

 

Leave a Reply

Your email address will not be published. Required fields are marked *

error: Content is protected !!