ಪುತ್ತೂರು: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಣೆಗೆ ಹೋಗಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗೆ ಗಾಯಗೊಳಿಸಿದ ಬೆಕ್ಕು
ಪುತ್ತೂರು: ಬಾವಿಗೆ ಬಿದ್ದು ಮೇಲೆ ಬರಲಾಗದೇ ಒದ್ದಾಡುತ್ತಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಮೇಲೆ ಬೆಕ್ಕು ಮಾರಣಾಂತಿಕವಾಗಿ ದಾಳಿ ಮಾಡಿದ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸಿದ್ದರೂಢ ಮತ್ತು ಮೌನೇಶ್ ಅವರಿಗೆ ಗಾಯಗಳಾಗಿದೆ.
ನಿನ್ನೆ ತೆಂಕಿಲ ಬಳಿಯ ಲಕ್ಷ್ಮೀ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಬೆಕ್ಕೊಂದು ಬಿದ್ದಿತ್ತು, ಬೆಕ್ಕು ಮೇಲೆ ಬರಲಾರದೆ ಬಾವಿಯಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ಹಿನ್ನಲೆ ಮನೆಯವರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದರು, ಇಂದು ಬೆಕ್ಕಿನ ರಕ್ಷಣೆಗೆ ಧಾವಿಸಿ ಬಂದಿದ್ದ ಅಗ್ನಿಶಾಮಕ ದಳ ತಂಡ ಆಗಮಿಸಿತ್ತು, ಬಾವಿಯೊಳಗಿನ ಒಂದು ಬಿಲದೊಳಗೆ ಬೆಕ್ಕು ಅವಿತುಗೊಂಡಿದ್ದು, ಬೆಕ್ಕಿನ ರಕ್ಷಣೆಗೆ ಇಳಿದಿದ್ದ ಅಗ್ನಿಶಾಮಕ ದಳದ ತಂಡದವರು ಬಾವಿಯೊಳಗೆ ಇಳಿದಿದ್ದಾರೆ.




