January 31, 2026

ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಲಾರಿ, ಕಾರು ಢಿಕ್ಕಿ: ನಾಲ್ವರಿಗೆ ಗಾಯ

0
image_editor_output_image658320391-1738131012167.jpg

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ರವಿವಾರ ತಡರಾತ್ರಿ ಲಾರಿ ಮತ್ತು ಕಾರು ಢಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು, ಕಾರಿನಲ್ಲಿ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಹಂಪೆಯ ವೇದಮ್ಮ (55) ಜ್ಞಾನಮ್ಮ (70), ಮಂಜುಳಾ (50) ಮತ್ತು ರೇಣುಕಾ (26) ಗಂಭೀರವಾಗಿ ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಕ್ಕಳು ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!