ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ ರೌಡಿಗಳು
ಹಾಸನ: ಖಾಸಗಿ ಬಸ್ ತಡೆದು ಪುಡಿ ರೌಡಿ ಅಟ್ಟಹಾಸ ಮೆರೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಬುಧವಾರ ನಸುಕಿನ ಜಾವ 2 ಗಂಟೆಗೆ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು.
ಈ ಸಂದರ್ಭದಲ್ಲಿ ಕೆಎ 51 ಎಂವಿ 8912 ನಂಬರ್ನ ಸ್ವಿಫ್ಟ್ ಕಾರನ್ನು ಬಸ್ಸಿನ ಮುಂದೆ ಅಡ್ಡ ಹಾಕಿ ನಿಲ್ಲಿಸಿದ್ದಾನೆ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದಾನೆ.




