ಚಿಕ್ಕಮಗಳೂರು: ರಾಜ್ಯದಲ್ಲಿ ಉಳಿದಿದ್ದ ಏಕೈಕ ನಕ್ಸಲ್ ಕೂಡ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದಾರೆ.
ಕಳೆದ 18 ವರ್ಷಗಳಿಂದ ಭೂಗತರಾಗಿದ್ದ ನಕ್ಸಲ್ ರವೀಂದ್ರ, ಎಸ್ ಪಿ ವಿಕ್ರಮ್ ಆಮೆ, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮುಂದೆ ಶರಣಾಗಿದ್ದಾರೆ. ನಕ್ಸಲ್ ರವೀಂದ್ರಗೆ ಚಿಕ್ಕಮಗಳೂರು ಜಿಲ್ಲಾಡಳಿತ 7 ಲಕ್ಷ ರೂ. ಪ್ಯಾಕೇಜ್ ಹಣ ಘೋಷಣೆ ಮಾಡಿದೆ.