March 19, 2026

ಬಾವಿಯಲ್ಲಿ ಬುಲೆಟ್ ಬೈಕ್ ಪತ್ತೆ

0
image_editor_output_image-1273804610-1738834026733.jpg

ಚಿಕ್ಕಬಳ್ಳಾಪುರ: ಬಾವಿಯಲ್ಲಿನ ನೀರನ್ನ ಕೃಷಿ ಚಟುವಟಿಕೆಗೆ ಬಳಸಿಕೊಳ್ಳಲು ಹೋದ ರೈತನಿಗೆ ಶಾಕ್ ಆಗಿದೆ. ಬಾವಿ ನೀರಲ್ಲಿ ಬುಲೆಟ್ ಬೈಕೊಂದು ಪತ್ತೆಯಾಗಿದೆ.

ಅಂದಹಾಗೆ ಈ ಘಟನೆ ನಡೆದಿರೋದು ಚಿಕ್ಕಬಳ್ಳಾಪುರ ತಾಲೂಕಿನ ಹರಿಹರಪುರದ ಬಳಿ. ಚಿಕ್ಕಬಳ್ಳಾಪುರ-ಆವಲಗುರ್ಕಿಯ ಈಶಾ ಮಾರ್ಗದ ಬಳಿಯ ಹರಿಹರಪುರ ಗ್ರಾಮದ ಬಳಿ ರಸ್ತೆ ಬದಿ ರೈತ ಪಾಪಣ್ಣ ಎಂಬುವವರ ಜಮೀನನಲ್ಲಿರೋ ಪಾಳು ಬಾವಿಯಲ್ಲಿ ಈ ಬುಲೆಟ್ ಬೈಕ್ ಪತ್ತೆಯಾಗಿದೆ.

ರೈತ ಪಾಪಣ್ಣ ಪಕ್ಕದ ತೋಟದ ರೈತರೊಬ್ಬರು ತಮ್ಮ ಬೆಳೆಗೆ ನೀರು ಹಾಯಿಸೋಕೆ ಅಂತ ಬಾವಿಯ ನೀರನ್ನ ಮೇಲೆತ್ತಲು ಮೋಟಾರು ಬಿಡಲು ಹೋದಾಗ ಬಾವಿಯಲ್ಲಿ ಬೈಕ್ ಕಾಣಿಸಿದೆ. ಅರೇ ಇದೇನಪ್ಪಾ ಅಂತ ಭಯದಿಂದ ನೀರನ್ನೆಲ್ಲಾ ಖಾಲಿ ಮಾಡಿ ಬೈಕ್ ಮೇಲೆತ್ತುವ ಪ್ರಯತ್ನ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!