ಮೀಟರ್ ಬಡ್ಡಿ ದಂಧೆ ಮಾಡುತ್ತಿದ್ದ ಇಬ್ಬರ ಬಂಧನ
ದಾಂಡೇಲಿ : ಅನಧಿಕೃತ ಮೀಟರ್ ಬಡ್ಡಿ ದಂಧೆ ಬಗ್ಗೆ ವ್ಯಾಪಕ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಹಾಗೂ ಡಿವೈಎಸ್ಪಿಶಿವಾನಂದ ಮದರಖಂಡಿ ಅವರ ಮಾರ್ಗದರ್ಶನದಲ್ಲಿ ನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಮೀಟರ್ ಬಡ್ಡಿ ದಂಧೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ಗಾಂಧಿನಗರದ ಕಂಜರಬಾಟಿನ ನಿವಾಸಿ ಕಿಶನ ಸುಭಾಷ್ ಕಂಜರಬಾಟ ಹಾಗೂ ವಿನೋದ ಸುರೇಶ ಮಿನೇಕರ ಎಂಬಿಬ್ಬರು ಬಂಧಿತ ಆರೋಪಿಗಳಾಗಿದ್ದಾರೆ.




