March 14, 2025

ಮೂರ್ಛೆ ಬಿದ್ದ ಚಾಲಕ: ನಿಯಂತ್ರಣ ತಪ್ಪಿದ KSRTC ಬಸ್ ಮರಕ್ಕೆ ಢಿಕ್ಕಿ

0

ಚಾಮರಾಜನಗರ:ಚಾಲಕ ಮೂರ್ಛ ಬಿದ್ದು ನಿಯಂತ್ರಣ ತಪ್ಪಿದ ಸರಕಾರಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಇಂದು ನಡೆಯಿತು.

ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಚಾಲಕನಿಗೆ ದಿಢೀ‌ರ್ ಮೂರ್ಛ ರೋಗ ಕಾಣಿಸಿಕೊಂಡಿದೆ. ಪರಿಣಾಮ, ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮುಂಭಾಗದಲ್ಲಿ ಕುಳಿತಿದ್ದ ಐವರು ಗಾಯಗೊಂಡಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!