December 16, 2025

ಮಂಗಳೂರು: ರಾಜ್ಯದ ಖ್ಯಾತ ಮಾಜಿ ಕ್ರೀಡಾಪಟು ಬೃಂದಾ ಪ್ರಭು ಹೃದಯಾಘಾತದಿಂದ ನಿಧನ

0
image_editor_output_image-1318489494-1739254566303.jpg

ಮಂಗಳೂರು: ರಾಜ್ಯದ ಖ್ಯಾತ ಮಾಡಿ ಕ್ರೀಡಾಪಟು ಬೃಂದಾ ಪ್ರಭು (68)ಹೃದಯಾಘಾತದಿಂದ ವಾರಣಾಸಿಯಲ್ಲಿ ನಿಧನರಾಗಿದ್ದಾರೆ.

ಬೃಂದಾ ಪ್ರಭು ಅವರು ಕೆಲವು ದಿನಗಳ ಹಿಂದೆ ಬೆಂಗಳೂರಿನಿಂದ ಹೊರಟು ಪ್ರಯಾಗ್ ರಾಜ್‌ಗೆ ಹೋಗಿ ಪುಣ್ಯಸ್ನಾನ ಮಾಡಿ, ರವಿವಾರ ಕಾಶಿಗೆ ತಲುಪಿ ವಿಶ್ವೇಶ್ವರನ ದರ್ಶನ ಮುಗಿಸಿ ಮಲಗಿದ್ದರು, ರಾತ್ರಿ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರ ಅಂತ್ಯಕ್ರಿಯೆಯನ್ನು ವಾರಾಣಸಿಯಲ್ಲೇ ನೆರವೇರಿಸಲಾಗುವುದು ಎಂದು ಹೇಳಲಾಗಿದೆ.

ರಾಷ್ಟ್ರೀಯ ಅಥ್ಲೆಟಿಕ್ಸ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ ಬೃಂದಾ ಪ್ರಭು, ಬೆಂಗಳೂರು ವಿಶ್ವವಿದ್ಯಾಲಯದ ವಾಲಿಬಾಲ್ ತಂಡದ ಉಪನಾಯಕಿಯೂ ಆಗಿದ್ದರು. ಮೂರೂವರೆ ದಶಕಗಳ ಹಿಂದೆ ಅಂತರರಾಷ್ಟ್ರೀಯ ಮಹಿಳಾ ಫುಟ್‌ಬಾಲ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಅಂಚೆ ಮತ್ತು ತಂತಿ ಇಲಾಖೆಯ ಅಖಿಲ ಭಾರತ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಚಾಂಪಿಯನ್‌ ಆಗಿದ್ದರು.

Leave a Reply

Your email address will not be published. Required fields are marked *

error: Content is protected !!