ಹಾಸನ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ: 14 ಮಂದಿ ಕೂಲಿ ಕಾರ್ಮಿಕರಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ
ಹಾಸನ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿ 14 ಮಂದಿ ಕೂಲಿ ಕಾರ್ಮಿಕರು ಗಾಯಗೊಂಡು, ನಾಲ್ವರು ಸ್ಥಿತಿ ಗಂಭೀರವಾಗಿರುವ ಘಟನೆ ಸಕಲೇಶಪುರ ತಾಲೂಕಿನ ನಿಡನೂರು ಕೂಡಿಗೆ ಬಳಿ ನಡೆದಿದೆ.
ತಮಿಳುನಾಡಿನ ಸೇಲಂನಿಂದ ಮಡಿಕೇರಿಯ ಶನಿವಾರಸಂತೆ ಬಳಿ ಇರುವ ಕಾಫಿ ತೋಟಕ್ಕೆ ಕಾರ್ಮಿಕರನ್ನು ಟಾಟಾ ವಿಂಗರ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ಬದಿಗೆ ವಾಹನ ಪಲ್ಟಿಯಾಗಿದೆ.




