ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಮರಕ್ಕೆ ಢಿಕ್ಕಿ: ಐವರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಜನರಿಗೆ ಗಂಭೀರ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಐವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ಜರುಗಿದೆ.
ಕೆ.ಆರ್.ಪೇಟೆ ತಾಲೂಕಿನ ಕುಂದಹಳ್ಳಿ ಬಳಿ ಈ ಅವಘಡ ಸಂಭವಿಸಿದೆ. ಬೆಳಗ್ಗೆ ಆಲೇನಹಳ್ಳಿ ಗ್ರಾಮದಿಂದ ಕೆ.ಆರ್.ಪೇಟೆಗೆ ಕೆಎಸ್ಆರ್ಟಿಸಿ ಬಸ್ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಇದ್ದ ಬೃಹತ್ ಮರಕ್ಕೆ ಬಸ್ ಡಿಕ್ಕಿಯಾಗಿದೆ.
ಪರಿಣಾಮ 20 ಜನರಿಗೆ ಗಂಭೀರ ಗಾಯವಾಗಿದ್ದು, ಈ ಪೈಕಿ ಹೆಚ್ಚು ಶಾಲಾ-ಕಾಲೇಜಿನ ವಿದ್ಯಾರ್ಥಿಗಳೇ ಇದ್ದಾರೆ. ಹಲವು ಮಕ್ಕಳ ಕೈ ಕಾಲು ಮುರಿದು ಗಂಭೀರ ಗಾಯಗೊಂಡಿದ್ದಾರೆ.