ವಿಟ್ಲ: ವಕ್ಫ್ ತಿದ್ದುಪಡಿ ವಿರೋಧಿಸಿ ಎಸ್ ಡಿ ಪಿ ಐ ಬಿತ್ತಿ ಪತ್ರ ಪ್ರದರ್ಶನ
ವಿಟ್ಲ: ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಕೇಂದ್ರ ಸರಕಾರದ ವಿರುದ್ದ 14/02/2025ರಂದು SDPI ವಿಟ್ಲ ಬ್ಲಾಕ್ ಸಮಿತಿ ವತಿಯಿಂದ ವಿಟ್ಲ ಕೇಂದ್ರ ಜುಮಾ ಮಸೀದಿ ಮತ್ತು ಟೌನ್ ಮಸೀದಿ ವಿಟ್ಲ ಬಳಿ ಬಿತ್ತಿ ಪತ್ರ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಯಿತು.
ಈ ಪ್ರತಿಭಟನೆಯಲ್ಲಿ SDPI ವಿಟ್ಲ ಬ್ಲಾಕ್ ಕಾರ್ಯದರ್ಶಿ ರಹೀಮ್ ಕಂಬಳಬೆಟ್ಟು, SDPI ವಿಟ್ಲ ಪಟ್ಟಣ ಸಮಿತಿ ಅಧ್ಯಕ್ಷರಾದ ರಫೀಕ್ ಪೊನ್ನೋಟು, ಹೈದರಾಲಿ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದರು.




