ಉಪ್ಪಿನಂಗಡಿ: ಬೆಂಕಿ ಅನಾಹುತದಿಂದ 250ಕ್ಕೂ ಹೆಚ್ಚು ಆಡಿಕೆ ಗಿಡಗಳು ಬೆಂಕಿಗಾಹುತಿ
ಉಪ್ಪಿನಂಗಡಿ : ಅಡಿಕೆ ತೋಟದಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದ 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿರುವ ಘಟನೆ ಹಿರೇಬಂಡಾಡಿ ಗ್ರಾಮದ ಪಡ್ಯೂಟ್ಟು ಎಂಬಲ್ಲಿ ನಡೆದಿದೆ.
ಪಡ್ಕೊಟ್ಟು ನಿವಾಸಿ ಯತೀಶ್ ಶೆಟ್ಟಿ ಎಂಬವರಿಗೆ ಸೇರಿದ ಸುಮಾರು 1 ಎಕ್ರೆ ಪ್ರದೇಶದಲ್ಲಿನ ಅಡಿಕೆ ತೋಟದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಸುಮಾರು 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿದ್ದು ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ.




