ಬಂದೂಕಿನಿಂದ ಪೈರಿಂಗ್ ಮಾಡಿದ 13 ವರ್ಷದ ಬಾಲಕ: 3 ವರ್ಷದ ಬಾಲಕ ಸಾವು
ಮಂಡ್ಯ: 13 ವರ್ಷದ ಬಾಲಕನೊಬ್ಬ ಅಸಲಿ ಬಂದೂಕು ಎಂದು ತಿಳಿಯದೇ ಫೈರಿಂಗ್ ಮಾಡಿದ ಪರಿಣಾಮ 3 ವರ್ಷದ ಬಾಲಕ ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ದೊಂದೇಮಾದಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದವರಾದ ಶಶಾಂಕ್ ಹಾಗೂ ಲಿಪಿಕಾ ದಂಪತಿಯ ಮಗ ಅಭಿಷೇಕ್(3) ಮೃತಪಟ್ಟ ಬಾಲಕ. ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಅವರ ಕೋಳಿ ಫಾರಂನಲ್ಲಿ ಕಳೆದು ಕೆಲವು ವರ್ಷಗಳಿಂದ ಈ ದಂಪತಿ ಕೆಲಸ ಮಾಡುತ್ತಿದ್ದರು. ದಂಪತಿಯನ್ನು ಭೇಟಿಯಾಗಲು ಭಾವಶಂಕರ್ ದಾಸ್ ಹಾಗೂ ಆತನ ಮಗ ಸುದೀಪ್ ದಾಸ್ ಬಂದಿದ್ದರು. ಈ ವೇಳೆ ಮಕ್ಕಳಿಬ್ಬರು ಆಟವಾಡುತ್ತಿದ್ದರು.
ಆಟವಾಡುತ್ತಿದ್ದಾಗ ಪರವಾನಗಿ ಪಡೆದು ಇಟ್ಟುಕೊಂಡಿದ್ದ ನರಸಿಂಹಮೂರ್ತಿ ಅವರ ಬಂದೂಕು ಸುದೀಪ್ ಕೈಗೆ ಸಿಕ್ಕಿದ್ದು, ಅಸಲಿ ಬಂದೂಕು ಎಂದು ತಿಳಿಯದೇ ಫೈರಿಂಗ್ ಮಾಡಿದ್ದಾನೆ. ಪರಿಣಾಮ ಅಲ್ಲಿಯೇ ಇದ್ದ ಅಭಿಷೇಕ್ ಹೊಟ್ಟೆಯೊಳಗೆ ಗುಂಡು ಹೊಕ್ಕಿದ್ದು, ತಾಯಿ ಲಿಪಿಕಾ ಕೂಡ ಗಾಯಗೊಂಡಿದ್ದಾರೆ.




