ಮುಂಡಾಜೆ: ಹೆದ್ದಾರಿ ಕಾಮಗಾರಿಗಾಗಿ ತಗ್ಗು ಪ್ರದೇಶಕ್ಕೆ ಬಿದ್ದ ಕಾರು

ಬೆಳ್ತಂಗಡಿ: ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಜಾರಿ ಹೆದ್ದಾರಿ ಕಾಮಗಾರಿಗಾಗಿ ತಗ್ಗು ಮಾಡಲಾದ ಪ್ರದೇಶದಲ್ಲಿ ಬಿದ್ದ ಘಟನೆ ಮಂಗಳವಾರ ನಡೆದಿದೆ.
ಚಾರ್ಮಾಡಿಯಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ಈ ಕಾರಿನಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರು ಪ್ರಯಾಣಿಸುತ್ತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.