ಬಂಟ್ವಾಳ, ಪುತ್ತೂರು ಸಹಿತ ಕರಾವಳಿಯಲ್ಲಿ ಸುಡು ಬಿಸಿಲು: ವಿಪರೀತ ಸೆಕೆ
ಮಂಗಳೂರು: ಬಂಟ್ವಾಳ, ಪುತ್ತೂರು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಉರಿ ಬಿಸಿಲು ಕಾಣಿಸಿಕೊಂಡಿದೆ. ಬಿಸಿಲಿನ ಜೊತೆ ಮೊಡ ಕವಿದವ ವಾತಾವರಣವಿದ್ದು, ತೇವಾಂಶ ಹೆಚ್ಚಾದ ಕಾರಣ ಮೇ ತಿಂಗಳ ಬಿಸಿಲಿನ ಝಳ ಈ ಬಾರಿ ಫೆಬ್ರವರಿಯಲ್ಲೇ ಕಾಣಿಸಿಕೊಂಡಿದೆ.
ಕರ್ನಾಟಕದಲ್ಲಿ ಕರಾವಳಿಯಲ್ಲಿ ಈಗ ಬೇಸಿಗೆ ಕಾಲ ಪ್ರಾರಂಭವಾಗಲಿದೆ. ಇನ್ನು ಮೂರು ತಿಂಗಳು ಕರಾವಳಿಯ ಜಿಲ್ಲೆಗಳಲ್ಲಿ ಬಿಸಿಲಿನ ಹೊಡೆತ ಜೋರಾಗಿಯೇ ಇರಲಿದೆ, ಈ ಬಾರಿ ಫೆಬ್ರವರಿಯಲ್ಲೇ ಸುಡು ಬಿಸಿಲು ಪ್ರಾರಂಭವಾಗಿದ್ದು. ಇನ್ನು ಎಪ್ರಿಲ್ ಮೇ ತಿಂಗಳಿನ ಕಥೆ ಹೇಗೆ ಎನ್ನವುದು ಆತಂಕಕ್ಕೆ ಕಾರಣವಾಗಿದೆ.
ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲು ಹೆಚ್ಚುತ್ತಾ ಹೋಗುತ್ತದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಧಗೆ ಕಂಡುಬರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಫೆಬ್ರವರಿ ತಿಂಗಳಿನಿಂದಲೇ ಸುಡು ಬಿಸಿಲು ಕಾಣಿಸಿಕೊಳ್ಳುತ್ತಿದ್ದು ಜನರು ಕಷ್ಟಪಡುತ್ತಿದ್ದಾರೆ. ಆದರೆ ಡಿಸೆಂಬರ್ ತಿಂಗಳಲ್ಲಿ ಫೆಂಗಾಲ್ ಚಂಡಮಾರುತದ ಬಳಿಕ ಜಿಲ್ಲೆಯಲ್ಲಿ ಮಳೆ ಸುರಿದಿಲ್ಲ.




