ಕಾಂಗ್ರೆಸ್ ಮುಖಂಡ ಹೈದರ್ ಅಲಿಯ ಭೀಕರ ಹತ್ಯೆ
ಬೆಂಗಳೂರು: ಕಾಂಗ್ರೆಸ್ ಮುಖಂಡ ಹೈದರ್ ಅಲಿ ಹತ್ಯೆ ಪ್ರಕರಣ ಸಂಬಂಧ ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು, ದೇಹದ 56 ಕಡೆ ಮಚ್ಚಿನಿಂದ ಕೊಚ್ಚಿ, ತಲೆ ಬುರುಡೆ ಛಿದ್ರಗೊಳಿಸಿ, ಕಿವಿ ಕಟ್ ಮಾಡಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಘಟನೆ ಶನಿವಾರ ರಾತ್ರಿ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡನ ಹತ್ಯೆ ಮಾಡಿದ್ದಾರೆ. ಶವ ಪತ್ತೆಯಾದಾಗ ಮೊದಲು ಅಪರಿಚಿತ ವ್ಯಕ್ತಿ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದರು.




