March 14, 2025

ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

0

ಮಂಡ್ಯ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ವಿಸಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಮೃತರನ್ನು ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಮಾಸ್ತಪ್ಪ (65), ರತ್ನಮ್ಮ (45) ಮತ್ತು ಲಕ್ಷ್ಮಿ (18) ಎಂದು ಗುರುತಿಸಲಾಗಿದೆ. ಮೂವರು ವಿಸಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಮಾಸ್ತಪ್ಪ ಅವರು ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ. ಸಾಲಭಾದೆ ತಾಳದೆ ಪತ್ನಿ ಹಾಗೂ ಪುತ್ರಿಯೊಂದಿಗೆ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!