ಪ್ರಯಾಗ್ರಾಜ್ ತೆರಳುತ್ತಿದ್ದಾಗ ರಸ್ತೆ ಅಪಘಾತ: ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾವು

ವಿಜಯಪುರ: ಪ್ರಯಾಗ್ರಾಜ್ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್ನ ಪೋರ್ಬಂದರ್ ಸಮೀಪ ನಡೆದಿದೆ.
ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗಿ (40) ಮೃತ ದುರ್ದೈವಿಗಳು.
ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಿಂದ ಚಾಲಕ ಸೇರಿ 17 ಮಂದಿ ಮ್ಯಾಕ್ಸಿ ಕ್ಯಾಬ್ನಲ್ಲಿ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಈ ವೇಳೆ ಮ್ಯಾಕ್ಸಿ ಕ್ಯಾಬ್, ಗುಜರಾತ್ನ ಪೋರ್ಬಂದರ್ ಸಮೀಪ ನಿಂತಿದ್ದ ಟಿಪ್ಪರ್ಗೆ ಡಿಕ್ಕಿಯಾಗಿದೆ.