ಅನೈತಿಕ ಸಂಬಂಧ ಶಂಕೆ: ಪತ್ನಿ, ಆಕೆಯ ಸ್ನೇಹಿತನನ್ನು ಹತ್ಯೆಗೈದ ಪತಿ

ತಿರುವನಂತಪುರಂ: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಸ್ನೇಹಿತನ ನಡುವೆ ಅನೈತಿಕ ಸಂಬಂಧವಿದೆ ಎಂಬ ಅನುಮಾನದಿಂದ ಇಬ್ಬರನ್ನೂ ಹತ್ಯೆಗೈದ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಕಲಂಜೂರು ಗ್ರಾಮದಲ್ಲಿ ನಡೆದಿದೆ.
ಹತ್ಯೆಗೀಡಾದವರನ್ನು ವೈಷ್ಣವಿ ಮತ್ತು ವಿಷ್ಣು ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ಬೈಜು ಎಂದು ಗುರುತಿಸಲಾಗಿದೆ. ಪತ್ನಿ ಹಾಗೂ ಆಕೆಯ ಸ್ನೇಹಿತನ ನಡುವೆ ಮೊಬೈಲ್ನಲ್ಲಿ ನಡೆದ ಚಾಟಿಂಗ್ನ್ನು ನೋಡಿ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.