2025-26ನೇ ಸಾಲಿನ ರಾಜ್ಯ ಬಜೆಟ್: 1.81 ಲಕ್ಷ ರೈತರಿಗೆ ಹನಿ, ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ.ಸಹಾಯಧನ
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.
• ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು ₹428 ಕೋಟಿ ಅನುದಾನ
• 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ₹440 ಕೋಟಿ ಸಹಾಯಧನ
• ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು ₹ 88 ಕೋಟಿ
• 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪನೆ
• 12,000 ಕೃಷಿ ಹೊಂಡಗಳ ಸ್ಥಾಪನೆ
• ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ
• ರೈತರ ಜೀವನೋಪಾಯವನ್ನು ಸುಧಾರಿಸಲು ‘ಸಮಗ್ರ ಮಳೆಯಾಶ್ರಿತ ಕೃಷಿ ನೀತಿ’ಯನ್ನು ಅನುಷ್ಠಾನ




