ರೌಡಿಶೀಟರ್ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಯ ಬಂಧನ
ಕಲಬುರಗಿ: ಇತ್ತೀಚಿಗೆ ರೌಡಿಶೀಟರ್ ವಿರೇಶ್ ಸಾರಥಿಯನ್ನ ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಯನ್ನು ಕಲಬುರಗಿಯ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿವಾನಂದ ಅಲಿಯಾಸ್ ಶಿವು ಕುಂಬಾರ ಬಂಧಿತ ಆರೋಪಿ. ಮಾ.4 ರಂದು ಬೆಳಗ್ಗೆ ರೌಡಿಶೀಟರ್ ವಿರೇಶ್ ಸಾರಥಿಯನ್ನು ಕಬ್ಬಿಣದ ರಾಡ್ನಿಂದ ಹೊಡೆದು ಶಿವು ಕೊಲೆ ಮಾಡಿದ್ದ. ರಾತ್ರಿಯೆಲ್ಲಾ ಎಣ್ಣೆ ಪಾರ್ಟಿ ಮಾಡಿ ಬೆಳಗ್ಗಿನ ಜಾವ ಕೊಲೆ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.




