ಪ್ರಿಯಕರನ ಜೊತೆ ಪತ್ನಿ ಪರಾರಿ: ಮನನೊಂದ ಪತಿ ನದಿಗೆ ಹಾರಿ ಆತ್ಮಹತ್ಯೆ
ಹಾಸನ: ಪ್ರಿಯಕರನ ಜೊತೆ ಪತ್ನಿ ಪರಾರಿಯಾದ ಹಿನ್ನೆಲೆ ಮನನೊಂದ ಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಾಕವಳ್ಳಿ ಗ್ರಾಮದ ಬಳಿ ನಡೆದಿದೆ.
ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ರವಿ (38) ಆತ್ಮಹತ್ಯೆಗೆ ಶರಣಾದ ಪತಿ. ರವಿಯ ಪತ್ನಿ ಕೆಲ ದಿನಗಳ ಹಿಂದೆ ಗಂಡನನ್ನು ಬಿಟ್ಟು ಮಗುವಿನೊಂದಿಗೆ ಹೊನ್ನವಳ್ಳಿ ಗ್ರಾಮದ ಪ್ರದೀಪ್ ಜೊತೆ ಪರಾರಿಯಾಗಿದ್ದಳು. ಇದರಿಂದ ಮನನೊಂದ ರವಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಸರಿಯಾಗಿ ಸ್ಪಂದಿಸದ ಕಾರಣ ಎಸ್ಪಿಗೂ ದೂರು ನೀಡಿದ್ದರು.




