ಮನೆಯಲ್ಲಿಯೇ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ತೀರ್ಥಹಳ್ಳಿ : ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಗುರುವಾರ ಸಂಜೆ ನಡೆದಿದೆ.
ಪಟ್ಟಣದ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ ಮುರುಳಿ (29 ) ನೇಣಿಗೆ ಶರಣಾದ ದುರ್ದೈವಿ.
ಗುರುವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಅಷ್ಟರಲ್ಲೆ ಪ್ರಾಣ ಹೋಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
>
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.