5 ವರ್ಷದ ಬಾಲಕಿಯ ಕುತ್ತಿಗೆ ಸೀಳಿಗೆ ದೇವಾಲಯದ ಮೆಟ್ಟಿಲುಗಳಿಗೆ ರಕ್ತ ತರ್ಪಣ
ಗುಜರಾತ್: ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಯ ಕುತ್ತಿಗೆ ಸೀಳಿಗೆ ದೇವಾಲಯದ ಮೆಟ್ಟಿಲುಗಳಿಗೆ ರಕ್ತ ತರ್ಪಣ ಮಾಡಿರುವ ಭೀಬತ್ಸ ಘಟನೆ ಗುಜರಾತಿನ ಛೋಟೌದೇಪುರ ಜಿಲ್ಲೆಯಲ್ಲಿ ನಡೆದಿದೆ. ಇದು ನರಬಲಿ ಪ್ರಕರಣವಾಗಿರಬಹುದು ಎಂದು ಪೊಲೀಸರು ಸೋಮವಾರ ಶಂಕಿಸಿದ್ದಾರೆ.
ಬುಡಕಟ್ಟು ಸಮುದಾಯ ಪ್ರಾಬಲ್ಯವಿರುವ ಜಿಲ್ಲೆಯ ಪಣೆಜ್ ಗ್ರಾಮದ ಮನೆಯಿಂದ ತಾಯಿಯ ಸಮ್ಮುಖದಲ್ಲಿಯೇ ಬಾಲಕಿಯನ್ನು ಇಂದು ಬೆಳಗ್ಗೆ ಆರೋಪಿ ಲಾಲಾ ತಾಡ್ವಿ ಅಪಹರಿಸಿದ್ದಾನೆ. ನಂತರ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಕೊಡಲಿಯಿಂದ ಆಕೆಯ ಕುತ್ತಿಗೆಗೆ ಸೀಳಿ ಹತ್ಯೆ ಮಾಡಿದ್ದಾನೆ ಎಂದು ASP ಗೌರವ್ ಅಗರ್ ವಾಲ್ ತಿಳಿಸಿದ್ದಾರೆ.
ನಂತರ ದುಷ್ಕರ್ಮಿ, ಬಾಲಕಿಯ ಕುತ್ತಿಗೆಯಿಂದ ಕೋಡಿಯಂತೆ ಹರಿಯುತ್ತಿದ್ದ ರಕ್ತವನ್ನು ಸಂಗ್ರಹಿಸಿದ್ದು, ತನ್ನ ಮನೆ ಸಮೀಪದ ಚಿಕ್ಕ ದೇವಾಲಯದ ಮೆಟ್ಟಿಲುಗಳಿಗೆ ತರ್ಪಣ ಮಾಡಿದ್ದಾನೆ. ಬಾಲಕಿಯ ತಾಯಿ ಮತ್ತು ಗ್ರಾಮದ ಇತರರು ಈ ಭೀಬತ್ಸ ಕೃತ್ಯವನ್ನು ನೋಡಿ ಶಾಕ್ ಆಗಿದ್ದಾರೆ. ಆದರೆ, ಆರೋಪಿ ಬಳಿ ಕೊಡಲಿ ಇದುದ್ದರಿಂದ ಏನೂ ಮಾಡದೇ ಮೂಕ ಪ್ರೇಕ್ಷಕರಾಗಿದ್ದಾರೆ.




