ಅತ್ತೆ-ಸೊಸೆ ನಡುವೆ ಪದೇಪದೇ ಜಗಳ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.
ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ. ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು.
ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು.